ಪುರುಷರಿಗೂ ಉಚಿತ ಬಸ್ ಚರ್ಚಿಸಿ ನಿರ್ಧಾರ: ಡಿ.ಕೆ ಶಿವಕುಮಾರ್

ಬೆಂಗಳೂರು: ವಯೋಮಿತಿ ಆಧಾರದಲ್ಲಿ ಶಕ್ತಿ ಯೋಜನೆಯನ್ನು ಪುರುಷರಿಗೂ ವಿಸ್ತರಿಸುವ ಕುರಿತು ಚರ್ಚಿಸಿ, ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.


ವಿಧಾನಸೌಧದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮಕ್ಕಳ ದಿನಾಚರಣೆ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ನೀಲಸಂದ್ರದ ಪಾಲಿಕೆ ಪ್ರಾಥಮಿಕ ಶಾಲೆ ವಿದ್ಯಾರ್ಥಿ ಚರಣ್ ಪ್ರಶ್ನೆಗೆ ಅವರು ಉತ್ತರಿಸಿದರು.

‘ನೀವು ಐದು ಗ್ಯಾರಂಟಿ ನೀಡಿದ್ದೀರಿ. ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಮಾಡಿದ್ದು, ನಮ್ಮ ಅಮ್ಮ ಅಕ್ಕ, ತಂಗಿಯರನ್ನು ಮಾತ್ರ ಊರಿಗೆ ಕರೆದುಕೊಂಡು ಹೋಗುತ್ತಾರೆ. ಗಂಡು ಮಕ್ಕಳಿಗೆ ಈ ಯೋಜನೆ ಇಲ್ಲವೇ’ ಎನ್ನುವುದು ಚರಣ್‌ ಪ್ರಶ್ನೆ.


Post a Comment

0 Comments