ಹಾಸನ:ನಗರದಲ್ಲಿ ಡಿ.5ರಂದು ಆಯೋಜಿಸಿರುವ ರಾಜ್ಯ ಕಾಂಗ್ರೆಸ್ ಸಮಿತಿ ಜನಕಲ್ಯಾಣ ಹಾಗೂ ಸ್ವಾಭಿಮಾನಿ ಸಮಾವೇಶಕ್ಕೆ ನಾನಾ ಕಡೆಯಿಂದ ಜನರನ್ನು ಕರೆ ತರಲು 1500 ಬಸ್ಗಳ ವ್ಯವಸ್ಥೆ ಕಲ್ಪಿಸಲು ಚಿಂತಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಭಿಮಾನಿಗಳು ಮತ್ತು ಸ್ವಾಭಿಮಾನಿ ಸಂಘಟನೆ ಬ್ಯಾನರ್ನಲ್ಲಿ ಸಮಾವೇಶ ಏರ್ಪಡಿಸಲು ನಿರ್ಧರಿಸಲಾಗಿತ್ತು. ಆದರೆ ಪಕ್ಷದಲ್ಲಿನ ಆಂತರಿಕ ಬೆಳವಣಿಗೆ ಬಳಿಕ ನಗರಕ್ಕೆ ಡಿ.2ರಂದು ಆಗಮಿಸಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೆಪಿಸಿಸಿ ವತಿಯಿಂದಲೇ ಜನಕಲ್ಯಾಣ ಹಾಗೂ ಸ್ವಾಭಿಮಾನಿ ಸಮಾವೇಶ ತನ್ನ ಅಧ್ಯಕ್ಷತೆಯಲ್ಲೇ ನಡೆಯಲಿದೆ ಎಂದು ಪ್ರಕಟಿಸಿದ್ದಾರೆ. ಅಲ್ಲದೆ ಎಲ್ಲ ಸಚಿವರು, ಶಾಸಕರು, ಪಕ್ಷದ ಮುಖಂಡರಿಗೆ ಸಮಾವೇಶಕ್ಕೆ ಜನರನ್ನು ಕರೆ ತಂದು ಯಶಸ್ವಿಗೊಳಿಸುವ ಟಾಸ್ಕ್ ಸಹ ನೀಡಿದ್ದಾರೆ.


0 Comments