ಹಾಸನ: ಮುಡಾ ಹಗರಣದ ವಿಚಾರವಾಗಿ ಹೆಚ್ಚು ವಿಚಾರಣೆ ನಡೆಯುತ್ತಿದ್ದು, ಅದಕ್ಕಿಂತ ಬ್ರಹ್ಮಾಂಡ ಭ್ರಷ್ಠಾಚಾರದಂತಹ ಹಗರಣ ನಮ್ಮ ಜಿಲ್ಲೆಯಲ್ಲಿಯೂ ನಡೆದಿದೆ. ಜಿಲ್ಲೆಯ ಯಗಚಿ ವಾಟೆಹೊಳೆ ಮುಳುಗಡೆ ಸಂತ್ರಸ್ತರಿಗೆ ಮಂಜೂರಾಗಿ ಆಗಿರುವ ಜಮೀನಿನಲ್ಲಿ ಅವ್ಯವಹಾರ ನಿರಂತರವಾಗಿ ನಡೆದುಕೊಂಡು ಬರುತ್ತಿದೆ ಈ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪು ಮಾಡಿರುವವರ ವಿರುದ್ಧ ಕ್ರಮ ಜರುಗಿಸಬೇಕೆಂದು ಮಾಜಿ ಸಚಿವ ಬಿ. ಶಿವರಾಂ ಒತ್ತಾಯಿಸಿದರು.
ಜಲ ನೈನ ಯೋಜನೆಗಳಿಗಾಗಿ ಭೂಮಿ ಕಳೆದುಕೊಂಡ ರೈತರಿಗೆ ಪರ್ಯಾಯ ಭೂಮಿ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಹಾಗೂ ಅಧಿಕಾರಿಗಳ ನಿರ್ಲಕ್ಷ ಸರಿಯಲ್ಲ. ಈಗಾಗಲೇ ಈ ವಿಚಾರದಲ್ಲಿ ದೊಡ್ಡ ಮಟ್ಟದ ಹಗರಣ ನಡೆದಿದ್ದು ಸರ್ಕಾರದ ಗಮನಕ್ಕೂ ಹೋಗಿದೆ. ಈ ಹಿಂದೆ ತನಿಖೆಯಾಗಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ತನಿಖೆ ಸಂಸ್ಥೆಗಳೇ ಆದೇಶ ನೀಡಿದ್ದರು ಈವರೆಗೂ ಯಾರೊಬ್ಬರ ಮೇಲೆಯೂ ಕ್ರಮ ಜರುಗಿಸಿಲ್ಲ ಎಂದರು. ಸರ್ಕಾರದ ನಿಯಮಾನುಸಾರ ಭೂಮಿ ಕಳೆದುಕೊಂಡ ರೈತರಿಗೆ ಪರ್ಯಾಯ ಭೂಮಿ ನೀಡಿ, ಅವರಿಗೆ ಬದುಕಲು ಅವಕಾಶ ಕೊಡಬೇಕು ಇನ್ನು ಕೆಲವರಿಗೆ ಭೂಮಿ ಸಿಕ್ಕರು ಅವರ ಹೆಸರಿಗೆ ಮಂಜೂರು ಮಾಡಿಕೊಡಲು ಇಲಾಖೆ ಅಧಿಕಾರಿಗಳು ಮೀನಾ ಮೇಷ ಎಣಿಸುತ್ತಿರುವುದು ಸರಿಯಲ್ಲ ಕೂಡಲೇ ಸಂಬಂಧಪಟ್ಟ ಸಚಿವರು ಈ ಬಗ್ಗೆ ಗಮನಹರಿಸಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದರು.
ಎತ್ತಿನಹೊಳೆ ಯೋಜನೆಯಲ್ಲಿ ಪರಿಹಾರ ವಿಳಂಬ ಕುರಿತು ಕಾಲುವೆಗೆ ಹಾರಿ ರೈತನು ಆತ್ಮಹತ್ಯೆ ಮಾಡಿಕೊಂಡಬಗ್ಗೆ ತಿಳಿದಿದ್ದು, ಈ ಬಗ್ಗೆ ಗಮನಸೆಳೆದು ಮೊದಲು ಪರಿಹಾರ ಕೊಡಿಸಿ ನಂತರ ಡ್ಯಾಮೇಜು ಹಣ ಕೂಡ ಕೊಡಿಸಲಾಗುವುದು. ಸ್ಥಳಕ್ಕೆ ಹೋಗಿ ಈ ವಿಚಾರವನ್ನು ಸರಕಾರದ ಮುಂದೆ ಇಡಲಾಗುವುದು ಎಂದು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಇತ್ತಿಚಿಗೆ ನಡೆದ ಜನಕಲ್ಯಾಣ ಸಮಾವೇಶ ಯಶಸ್ವಿಯಾಗಿ ನಡೆದಿದ್ದು, ಪಕ್ಷದ ಸಂಘಟನೆಗಾಗಿ ಮತ್ತು ವಿರೋಧ ಪಕ್ಷಕ್ಕೆ ಉತ್ತರಕ್ಕಾಗಿ ಈ ಸಮಾವೇಶ ನಡೆಸಲಾಗಿದೆ ಎಂದರು.
.jpg)


0 Comments